ಬೆಂಗಳೂರು : ಹುಸ್ಕೂರು ಎಪಿಎಂಸಿಯಿಂದ ಬರುತ್ತಿದ್ದ ಕ್ಯಾಂಟರ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.


ಬೆಂಗಳೂರು ಉತ್ತರ ತಾಲೂಕಿನ ಮಾಕಳಿಯ ಎಪಿಎಂಸಿ ರಸ್ತೆಯ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಸ್ಕೂಟರ್‌ಗೆ ಜೋರಾಗಿ ಅಪ್ಪಳಿಸಿದ ಹಿನ್ನೆಲೆ ಸ್ಕೂಟರ್ ಚಾಲಕನ ತಲೆಬುರುಡೆ ನುಜ್ಜುಗುಜ್ಜಾಗಿದೆ.


ಸಾವನ್ನಪ್ಪಿರುವ ವ್ಯಕ್ತಿಯ ಮಾಹಿತಿ ಸಂಗ್ರಹ ಮಾಡುತ್ತಿರುವ ಪೊಲೀಸರು, ಘಟನೆ ಪರಿಣಾಮ ಎಪಿಎಂಸಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Contact Us